ಕುಂದಾಪುರ: ನವೆಂಬರ್ 9ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಅಧ್ಯಾಪಕರ ಸಂಘದ ಆಶ್ರಯದಲ್ಲಿ "ಕ್ಯಾನ್ಸರ್ ಕುರಿತು ಜಾಗೃತಿ"ಕಾರ್ಯಕ್ರಮ ನಡೆಯಿತು

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ  ಮುಂಬೈ ನ ಕಾರ್ಕಿನೋಸ್ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್ ನ ಸಾರ್ವಜನಿಕ ಆರೋಗ್ಯ ಸಲಹೆಗಾರಾದ ಡಾ.ಪ್ರಶಾಂತ ಮಾತನಾಡಿ ಕ್ಯಾನ್ಸರ್ ರೋಗವನ್ನು ತಡೆಗಟ್ಟಲು ಇರುವ ಮಾರ್ಗೋಪಾಯಗಳನ್ನು ತಿಳಿಸಿದರು. 

ಅವರು ಮಾತನಾಡಿ ನಮ್ಮ ಜೀವನಶೈಲಿ ಹಲವು ರೋಗಗಳಿಗೆ ಕಾರಣವಾಗುತ್ತದೆ. ಆದ್ದರಿಂದ ನಮ್ಮ ಜೀವನಶೈಲಿಯನ್ನು ಉತ್ತಮವಾಗಿ ನಿರ್ವಹಿಸಲು ನಾವು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದರು. 

ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಅಧ್ಯಕ್ಷತೆಯನ್ನು ವಹಿಸಿದ್ದರು.

ಅಧ್ಯಾಪಕರ ಸಂಘದ ಉಪಾಧ್ಯಕ್ಷೆ ಡಾ.ಸರೋಜ ಎಂ. ಉಪಸ್ಥಿತರಿದ್ದರು.

ಅಧ್ಯಾಪಕರ ಸಂಘದ ಖಜಾಂಚಿ ದುರ್ಗಾಪ್ರಸಾದ್ ಮತ್ತು ವಂದಿಸಿದರು. ಸಹಕಾರ್ಯದರ್ಶಿ ಸುಮಲತಾ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.

Comments

Popular posts from this blog

ರಕ್ತದಾನ ಜೀವದಾನ : ಎಸ್. ಜಯಕರ್ ಶೆಟ್ಟಿ,

ಇನ್ಸ್ಟಿಟ್ಯೂಷನ್ ಇನ್ನೋವೇಶನ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ