ರಕ್ತದಾನ ಜೀವದಾನ : ಎಸ್. ಜಯಕರ್ ಶೆಟ್ಟಿ ಕುಂದಾಪುರ : "ರಕ್ತದಾನವೆಂದರೆ ಜೀವದಾನ ಮಾಡಿದ ಹಾಗೆ... ಬೇರೆಲ್ಲಾ ದಾನಕ್ಕಿಂತ ಶ್ರೇಷ್ಠವಾದ ದಾನವೆಂದರೆ ಅದು ರಕ್ತದಾನ "ಎಂದು ಎಸ್. ಜಯಕರ್ ಶೆಟ್ಟಿ, ಸಭಾಪತಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರು ಹೇಳಿದರು. ಅವರು ಇಲ್ಲಿನ ಭಂಡಾರಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಶಾಖೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮಕ್ಕೆ ಅಧ್ಯಕ್ಷರಾಗಿ ಭಾಗವಹಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮುಂದೆ ಬಂದು ರಕ್ತದಾನ ಮಾಡಿ ಜೀವ ಉಳಿಸುವ ಕಾರ್ಯದಲ್ಲಿ ಕೈಜೋಡಿಸಬೇಕು ರಕ್ತದಾನದ ಮಹತ್ವವನ್ನು ಅರಿಯಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಕಾಲೇಜಿನ ರೆಡ್ ಕ್ರಾಸ್ ಸಂಘಟಿಗರನ್ನು ಮತ್ತು ಹತ್ತು ಹಲವು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳ್ಳನ್ನ ಸನ್ಮಾನಿಸಲಾಯಿತು. ಎನ್ ಪಿ ನಾರಾಯಣ್ ಶೆಟ್ಟಿ, ಪದವಿ ಪ್ರಾಂಶುಪಾಲರು ಭಂಡಾರಕಾರ್ಸ್ ಕಾಲೇಜು ಕುಂದಾಪುರ ಇವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಡಾ.ಶುಭಕರ ಆಚಾರಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಭಂಡಾರಕಾರ್ಸ್ ಕಾಲೇಜು ಕುಂದಾಪುರ, ಶಿವರಾಮ ಶೆಟ್ಟಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ಸತ್ಯನಾರಾಯಣ ಕಾರ್ಯಕ್ರಮ ಸಂಯೋಜಕರು
ಇನ್ಸ್ಟಿಟ್ಯೂಷನ್ ಇನ್ನೋವೇಶನ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ ಕುಂದಾಪುರ : ಅಕ್ಟೋಬರ್ 6 ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು . ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಣಿಪಾಲದ ಮಾಹೆ ಇದರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಗಿರಿಜಾ ಅತ್ತೀಗೇರಿ ಡಿಸೈನ್ ಥಿಂಕಿಂಗ್ ಮತ್ತು ಐಡಿಯೇಟ್ ಎಂಬ ವಿಷಯದ ಕುರಿತು ಮಾತನಾಡಿದರು . ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಮಣಿಪಾಲದ ಮಾಹೆ ಇದರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಸುಚೇತಾ ವಿ . ಕೋಟೇಕಾರ್ ಅವರು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿಗೆ ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಕೋಶ ಇದರ ಉಪಯೋಗವನ್ನು ಕುರಿತು ಮಾಹಿತಿ ನೀಡಿದರು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ . ಶುಭಕರಾಚಾರಿ ಮಾತನಾಡಿ ನೀವು ಉದ್ಯೋಗದಾತರಾಗಿ ಬೆಳೆಯಬೇಕು ಎಂದು ಹೇಳಿದರು . ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ , ಐಕ್ಯೂಎಸಿ ಸಂಯೋಜಕರಾದ ಡಾ . ವಿಜಯ ಕುಮಾರ್ ಉಪಸ್ಥಿತರಿದ್ದರು . ಕಾಲೇಜಿನ ಇನ್ಸ್ಟಿಟ್ಯೂಷನ್
ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ ಕುಂದಾಪುರ: ಏಪ್ರಿಲ್ 19ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕ ಡಾ.ಹಯವದನ ಉಪಾಧ್ಯಾಯ ಮಾತನಾಡಿ ಸಂಶೋಧನೆಯ ಕಾರ್ಯ ನಿರಂತರವಾಗಿರಬೇಕು. ಸಂಶೋಧಕನಾದವನು ವೈಜ್ಞಾನಿಕ ನೆಲೆಯಲ್ಲಿ ಆಲೋಚಿಸಬೇಕು. ಅವರವರ ಆಯ್ಕೆಯ ವಿಷಯದಲ್ಲಿ ಆಸಕ್ತಿಯಿಂದ ಸಂಶೋಧನೆ ಮಾಡಬೇಕೆ ಹೊರತು ಕಾಟಾಚಾರಕ್ಕೆ ಮಾಡಬಾರದು. ಹಾಗೆ ಸಂಶೋಧನೆಯ ಮೂಲಕ ಸಕಾರಾತ್ಮಕ ಬೆಳವಣಿಗೆಯನ್ನು ಕಂಡುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಸಂಯೋಜಕರು ಮತ್ತು ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ.ಯಶವಂತಿ ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
Comments
Post a Comment